Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:9 - ಕನ್ನಡ ಸಮಕಾಲಿಕ ಅನುವಾದ

9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:9
13 ತಿಳಿವುಗಳ ಹೋಲಿಕೆ  

ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು. ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ವೃದ್ಧಿಪಡಿಸುವೆನು,” ಎಂದು ಅವನಿಗೆ ಹೇಳಿದರು.


ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.


ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು