Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:39 - ಕನ್ನಡ ಸಮಕಾಲಿಕ ಅನುವಾದ

39 ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:39
17 ತಿಳಿವುಗಳ ಹೋಲಿಕೆ  

ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.


ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ.


ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.


ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.


ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ.


“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು