Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:45 - ಕನ್ನಡ ಸಮಕಾಲಿಕ ಅನುವಾದ

45 ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45-46 ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:45
22 ತಿಳಿವುಗಳ ಹೋಲಿಕೆ  

ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.


ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ”


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.


ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು