Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:7 - ಕನ್ನಡ ಸಮಕಾಲಿಕ ಅನುವಾದ

7 ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:7
19 ತಿಳಿವುಗಳ ಹೋಲಿಕೆ  

ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.


ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು.


ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.


ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು