Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:13 - ಕನ್ನಡ ಸಮಕಾಲಿಕ ಅನುವಾದ

13 ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಸಂತತಿಯು ನಿರ್ಮೂಲವಾಗಲಿ. ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:13
17 ತಿಳಿವುಗಳ ಹೋಲಿಕೆ  

ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”


ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ.


ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.


ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.


ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ.


ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.


ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು