Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:14 - ಕನ್ನಡ ಸಮಕಾಲಿಕ ಅನುವಾದ

14 ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮರೆಯದಿರಲಿ ಪ್ರಭು ಅವನಾ ಹಿರಿಯರ ದೋಷವನು I ಪರಿಹರಿಸದಿರಲಿ ಅವನ ತಾಯಿಯು ಗೈದ ಪಾಪವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:14
15 ತಿಳಿವುಗಳ ಹೋಲಿಕೆ  

ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.


ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.


ಇವನು ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದು, ಅಹಾಬನ ಮನೆಯವರ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಏಕೆಂದರೆ ಇವನು ಅಹಾಬನ ಅಳಿಯನಾಗಿದ್ದನು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.


ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.


ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು