Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:2 - ಕನ್ನಡ ಸಮಕಾಲಿಕ ಅನುವಾದ

2 “ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 “ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು - ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:2
18 ತಿಳಿವುಗಳ ಹೋಲಿಕೆ  

“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.


ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.


ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.


ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.


ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.


ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.


ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.


ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು.


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.


ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.


ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು.


ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ, ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ.


ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.


“ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು