Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:2
20 ತಿಳಿವುಗಳ ಹೋಲಿಕೆ  

ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ, ‘ಬಲವಾದ ಕೋಲೂ, ಮಹಿಮೆಯ ಬೆತ್ತವೂ ಹೇಗೆ ಮುರಿದುಹೋಯಿತು?’ ಎಂದು ಹೇಳಿರಿ.


ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.


ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.


ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಹಿಡಿದುಕೊಂಡು ನದಿ, ಕಾಲುವೆ, ಕೆರೆಗಳ ಮೇಲೆಲ್ಲಾ ನಿನ್ನ ಕೈಚಾಚಿ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಬರುವಂತೆ ಮಾಡು,’ ಎಂದು ಹೇಳಬೇಕು,” ಎಂದರು.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು