Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:4 - ಕನ್ನಡ ಸಮಕಾಲಿಕ ಅನುವಾದ

4 ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:4
26 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು.


ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.


ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.


ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.


ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನೀನು ಏನಾದರೂ ನಿರ್ಣಯಿಸಿದ್ದರೆ, ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.


ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು; ನಾನು ದೇವರ ಬೆಳಕಿನಿಂದ ಕತ್ತಲಲ್ಲಿ ನಡೆಯುತ್ತಿದ್ದೆ.


ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು ನಮ್ಮ ದೇವರು ಅನುಕಂಪ ಭರಿತರು.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.


ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು