Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ; ನಾನು ಕೊರತೆಯಲ್ಲಿದ್ದಾಗ, ಅವರು ನನ್ನನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸಾಧುಜನರನ್ನು ಕಾಪಾಡುವವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:6
11 ತಿಳಿವುಗಳ ಹೋಲಿಕೆ  

ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಪೂರ್ವಿಕರ ಪಾಪಗಳನ್ನು ನಮಗೆ ವಿರೋಧವಾಗಿ ಜ್ಞಾಪಕ ಮಾಡಿಕೊಳ್ಳಬೇಡಿರಿ. ನಿಮ್ಮ ಕರುಣೆಯು ಬೇಗ ನಮ್ಮನ್ನು ಎದುರುಗೊಳ್ಳಲಿ. ನಾವು ಬಹಳವಾಗಿ ಕುಗ್ಗಿಹೋಗಿದ್ದೇವೆ.


ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.


ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು