Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:109 - ಕನ್ನಡ ಸಮಕಾಲಿಕ ಅನುವಾದ

109 ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

109 ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

109 ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

109 ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

109 ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:109
11 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.


ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.


ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”


ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು ಬಹುಕಾಲದ ಹಿಂದೆಯೇ ನಾನು ಕಲಿತುಕೊಂಡಿದ್ದೇವೆ.


ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು; ನಿಮ್ಮ ತೀರ್ಪುಗಳಿಗೆ ಯಾವಾಗಲೂ ಗಮನಕೊಡುವೆನು.


ನಾನು ಹೊಗೆಯಲ್ಲಿರುವ ದ್ರಾಕ್ಷಾರಸದ ಚರ್ಮಚೀಲದಂತ್ತಿದ್ದರೂ, ನಿಮ್ಮ ತೀರ್ಪುಗಳನ್ನು ನಾನು ಮರೆಯಲಿಲ್ಲ.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು