Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:126 - ಕನ್ನಡ ಸಮಕಾಲಿಕ ಅನುವಾದ

126 ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

126 ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

126 ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

126 ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:126
14 ತಿಳಿವುಗಳ ಹೋಲಿಕೆ  

“ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.


ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.


ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.


“ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು. ನಾನು ನಾಶಮಾಡಿ, ಒಂದೇ ಸಾರಿ ನುಂಗಿಬಿಡುವೆನು.


ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು