Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:22 - ಕನ್ನಡ ಸಮಕಾಲಿಕ ಅನುವಾದ

22 ನಾನು ನಿಮ್ಮ ಶಾಸನಗಳನ್ನು ಕೈಗೊಂಡ ಕಾರಣ, ಗರ್ವಿಷ್ಠರ ನಿಂದೆಯನ್ನೂ, ತಿರಸ್ಕಾರವನ್ನೂ ನನ್ನಿಂದ ತೊಲಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿನ್ನ ಕಟ್ಟಳೆಗಳನು ಕೈಗೊಂಡು ನಡೆವವನು ನಾನು I ನನಗಿರುವ ನಿಂದಾಪಮಾನಗಳನು ತೊಲಗಿಸು ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದ ನನಗಿರುವ ನಿಂದಾಪಮಾನಗಳನ್ನು ತೊಲಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:22
18 ತಿಳಿವುಗಳ ಹೋಲಿಕೆ  

ನಾನು ಭಯಪಡುವ ನನ್ನ ನಿಂದೆಯನ್ನು ನನ್ನಿಂದ ತೊಲಗಿಸಿರಿ, ಏಕೆಂದರೆ ನಿಮ್ಮ ನಿಯಮಗಳು ಒಳ್ಳೆಯವುಗಳೇ.


ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ; ಬುದ್ಧಿಹೀನನ ನಿಂದೆಗೆ ನನ್ನನ್ನು ಪರಿಹಾಸ್ಯ ಮಾಡಬೇಡಿರಿ.


ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ಭರವಸೆಯಿಟ್ಟಿದ್ದೇನೆ.


“ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಆದರೆ ನನ್ನ ಮಿತ್ರ ನನಗಾಗಿ ವಿಜ್ಞಾಪನೆಮಾಡುತ್ತಿದ್ದಾರೆ; ನನ್ನ ಕಣ್ಣುಗಳು ದೇವರ ಮುಂದೆ ಕಣ್ಣೀರು ಸುರಿಸುತ್ತವೆ.


ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.


ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು