Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:9 - ಕನ್ನಡ ಸಮಕಾಲಿಕ ಅನುವಾದ

9 ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:9
29 ತಿಳಿವುಗಳ ಹೋಲಿಕೆ  

ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.


ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.


ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.


ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.


ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


“ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು.


“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.


ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ.


ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; ತಿಳುವಳಿಕೆಯು ನಿನ್ನನ್ನು ಕಾಪಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು