Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:98 - ಕನ್ನಡ ಸಮಕಾಲಿಕ ಅನುವಾದ

98 ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು ನನ್ನ ಶತ್ರುಗಳಿಗಿಂತ ಜ್ಞಾನಿಯಾಗಿ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

98 ನಿನ್ನಾಜ್ಞೆಗಳು ಸದಾ ನನ್ನೊಂದಿಗಿರುವುದರಿಂದ I ನಾನಧಿಕ ಬುದ್ಧಿವಂತ ನನ್ನ ಶತ್ರುಗಳಿಗಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ; ಸದಾಕಾಲವೂ ಅವೇ ನನಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

98 ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. ಅವು ಯಾವಾಗಲೂ ನನ್ನೊಂದಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:98
12 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಾನು ನಿಮ್ಮ ನಿಯಮಗಳ ಮೇಲೆ ನನ್ನ ಹೃದಯವನ್ನಿಟ್ಟುಕೊಂಡಿದ್ದೇನೆ.


ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?


ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.


ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು