Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:6
16 ತಿಳಿವುಗಳ ಹೋಲಿಕೆ  

“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.


ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


“ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು ಅವು ಹೃದಯಕ್ಕೆ ಆನಂದಕರವಾಗಿವೆ; ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, ಕಣ್ಣುಗಳಿಗೆ ಪ್ರಕಾಶಕರವಾಗಿವೆ.


ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.


ನಿಮ್ಮ ವಾಗ್ದಾನಗಳು ಬಹು ಪರಿಶೋಧಿತವಾಗಿವೆ, ಆದ್ದರಿಂದ ನಿಮ್ಮ ಸೇವಕನು ಅವುಗಳನ್ನು ಪ್ರೀತಿಸುತ್ತಾನೆ.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.


ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.


ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.


ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.


“ಅವರಿಗೆ ವಿರುದ್ಧವಾಗಿ ಏಳುತ್ತೇನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಬಾಬಿಲೋನಿನಿಂದ ಆಕೆಯ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಮಕ್ಕಳನ್ನೂ ಅದರ ಸಂತತಿಯವರನ್ನೂ ನಿರ್ಮೂಲ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೀಗೆನ್ನುತ್ತಾರೆ, “ನಾನು ಈಗ ಏಳುವೆನು. ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು. ಈಗ ಉನ್ನತೋನ್ನತನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು