Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:4 - ಕನ್ನಡ ಸಮಕಾಲಿಕ ಅನುವಾದ

4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶೂರನ ಹದವಾದ ಬಾಣಗಳನ್ನೂ ಜಾಲಿಯ ಕೆಂಡಗಳನ್ನೂ ನಿನಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:4
19 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.


ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.


ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.


ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.


ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.


ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.


ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.


ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.


ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.


ಅಂಥವರಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿದ್ದಾರೆ; ತಮ್ಮ ಅಗ್ನಿಬಾಣಗಳನ್ನು ಸಿದ್ಧಮಾಡುತ್ತಾರೆ.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು