Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 123:3 - ಕನ್ನಡ ಸಮಕಾಲಿಕ ಅನುವಾದ

3 ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು; ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಯೆತೋರು ಪ್ರಭು, ನಮಗೆ ದಯೆ ತೋರು I ಅತ್ಯಧಿಕವಾಗಿ ನಾವು ತಿರಸ್ಕೃತರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅಪಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 123:3
17 ತಿಳಿವುಗಳ ಹೋಲಿಕೆ  

ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.


ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.


ಯೆಹೋವ ದೇವರ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಅರಸನಾದ ದಾವೀದನು ಯೆಹೋವ ದೇವರ ಮುಂದೆ ಕುಣಿದಾಡುವುದನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.


ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


ನನ್ನ ಅತಿಥಿಗಳು, ನನ್ನ ದಾಸದಾಸಿಯರೂ ನನ್ನನ್ನು ಅನ್ಯನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.


ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ.


ಆದ್ದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು. ಪರ್ವತಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ: ಇತರ ಜನಾಂಗಗಳ ಅವಮಾನವನ್ನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರದಿಂದಲೂ ಮಾತನಾಡಿದ್ದೇನೆ.


ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು