Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 124:3 - ಕನ್ನಡ ಸಮಕಾಲಿಕ ಅನುವಾದ

3 ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 124:3
18 ತಿಳಿವುಗಳ ಹೋಲಿಕೆ  

ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.


ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.


“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.


ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.


ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


“ಅವುಗಳನ್ನು ಒಟ್ಟಾಗಿ ಕೆಡವಿಬಿಡೋಣ,” ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಟ್ಟಿದ್ದಾರೆ.


ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.


ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು