Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 125:3 - ಕನ್ನಡ ಸಮಕಾಲಿಕ ಅನುವಾದ

3 ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವಾಸ್ತ್ಯದಲ್ಲಿ ಉಳಿಯುವದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಚ್ಚಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 125:3
11 ತಿಳಿವುಗಳ ಹೋಲಿಕೆ  

ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ಶತ್ರುವು ಅವನನ್ನು ಜಯಿಸಲಾರನು. ಯಾವ ದುಷ್ಟನೂ ಅವನನ್ನು ಹಿಂಸೆಪಡಿಸನು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;


ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ.


ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು