Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 13:2 - ಕನ್ನಡ ಸಮಕಾಲಿಕ ಅನುವಾದ

2 ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎನಿತುಕಾಲ ನಾ ಚಿಂತೆಯಿಂದಿರಬೇಕು? I ದಿನವೆಲ್ಲಾ ಮನದಲ್ಲಿ ನೊಂದಿರಬೇಕು? I ನನ್ನ ಮೇಲೆ ವೈರಿ ದೊರೆತನ ಮಾಡಬೇಕು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿ ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಷ್ಟರವರೆಗೆ ವಿರೋಧಿಯು ನನಗೆ ದೊರೆಯಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 13:2
44 ತಿಳಿವುಗಳ ಹೋಲಿಕೆ  

ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು.


ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.


ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.


ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.


ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ.


ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.


ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ.


ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.


ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ.


ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.


ನನ್ನನ್ನು ಬಾಧಿಸುವ ದುಷ್ಟರಿಂದಲೂ, ನನ್ನನ್ನು ಸುತ್ತಿಕೊಳ್ಳುವ ನನ್ನ ಪ್ರಾಣಾಂತಕ ಶತ್ರುಗಳಿಂದಲೂ ತಪ್ಪಿಸಿ.


ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.


ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.


ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.


ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು.


ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.


ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,


ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.


ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು.


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’


ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ.


ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ.


ನೀವು ನಮ್ಮನ್ನು ಯಾವಾಗಲೂ ಮರೆಯುವುದೇಕೆ? ಇಷ್ಟುಕಾಲ ನಮ್ಮನ್ನು ಮರೆತಿರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು