Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 13:4 - ಕನ್ನಡ ಸಮಕಾಲಿಕ ಅನುವಾದ

4 “ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಾನು ಜಯಗಳಿಸಿದೆನೆಂದು ಶತ್ರು ಹೇಳಿಕೊಳ್ಳದಿರಲಿ I ನಾನು ಜಾರಿ ಬಿದ್ದೆನೆಂದು ವೈರಿ ಹಿರಿಹಿಗ್ಗದಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಶತ್ರುವು - ಅವನನ್ನು ಜಯಿಸಿದೆನೆಂದು ಹೇಳಿಕೊಳ್ಳಬಾರದು; ವೈರಿಗಳು ಜಾರಿಬಿದ್ದನೆಂದು ಹಿಗ್ಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 13:4
17 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ.


ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು.


ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.


ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.


ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು