Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:17 - ಕನ್ನಡ ಸಮಕಾಲಿಕ ಅನುವಾದ

17 “ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇವಿುಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:17
11 ತಿಳಿವುಗಳ ಹೋಲಿಕೆ  

ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.


“ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.


ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.


ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”


ಸಮುದ್ರ ಹಾಗು ನದಿಗಳ ಮೇಲೆ ಅವನ ಬಲಗೈಯನ್ನೂ ಇರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು