Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:12 - ಕನ್ನಡ ಸಮಕಾಲಿಕ ಅನುವಾದ

12 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:12
10 ತಿಳಿವುಗಳ ಹೋಲಿಕೆ  

ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು