Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, ನಮಗೆ ಹಾಡನ್ನು ಹಾಡಲು ಹೇಳಿದ್ದರು; ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; “ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೆರೆಹಿಡಿದು ಬಂಧಿಸಿದಾ ಜನ ಈ ಪರಿ ಪೀಡಿಸಿದರೆಮ್ಮನು: I “ಹಾಡಿ, ನಮ್ಮ ವಿನೋದಕ್ಕಾಗಿ ಸಿಯೋನಿನ ಗೀತೆಗಳಲೊಂದನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ - ನೀವು ಚೀಯೋನಿನ ಗೀತಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:3
18 ತಿಳಿವುಗಳ ಹೋಲಿಕೆ  

ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ.


ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.


ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ. ನಿಮಗೆ ನಮ್ಮ ಹರಕೆಗಳನ್ನು ಪೂರೈಸುವೆವು.


ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.


ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.


ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ದಾವೀದನೂ, ಮಂಜೂಷವನ್ನು ಹೊರುವ ಲೇವಿಯರೂ, ಹಾಡುಗಾರರೂ, ಸಂಗೀತಗಾರರ ನಾಯಕನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡಿದ್ದನು.


ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು