Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:4 - ಕನ್ನಡ ಸಮಕಾಲಿಕ ಅನುವಾದ

4 ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:4
21 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.


ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”


ನಮ್ಮ ಪಿತೃಗಳಿಗೆ ಕೊಟ್ಟ ಆಜ್ಞೆಗಳನ್ನು, ಅಪ್ಪಣೆಗಳನ್ನು, ನಿಯಮಗಳನ್ನು ಕೈಗೊಂಡು ಅವರ ಎಲ್ಲಾ ಮಾರ್ಗಗಳಲ್ಲಿ ನಡೆಯಲು ಅವರು ನಮ್ಮ ಹೃದಯಗಳನ್ನು ಅವರ ಕಡೆಗೆ ತಿರುಗಿಸಲಿ.


ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.


ಆಗ ಯಾಕೋಬನು ಹೋಗಿ ಅವುಗಳನ್ನು ಹಿಡಿದು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು, ಅವನ ತಂದೆಯು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.


ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.


ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು