Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:4 - ಕನ್ನಡ ಸಮಕಾಲಿಕ ಅನುವಾದ

4 ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:4
19 ತಿಳಿವುಗಳ ಹೋಲಿಕೆ  

ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.


ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ. ಅಂಧಕಾರವೇ ನನ್ನ ಪರಿಚಯವು.


ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.


ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು.


ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ.


ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.


ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.


ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು