Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:10 - ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:10
36 ತಿಳಿವುಗಳ ಹೋಲಿಕೆ  

ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.


ಯೆಹೋವ ದೇವರೇ, ನಿಮಗೆ ಸ್ತುತಿಯುಂಟಾಗಲಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.


ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ.


ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ.


ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸಿರಿ, ಏಕೆಂದರೆ ನಾನು ಅದರಲ್ಲಿ ಆನಂದಿಸುತ್ತೇನೆ.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ.


ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.


ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ.


ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು; ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.


ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು