Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:5 - ಕನ್ನಡ ಸಮಕಾಲಿಕ ಅನುವಾದ

5 ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:5
17 ತಿಳಿವುಗಳ ಹೋಲಿಕೆ  

ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.


ಸಾರ್ವಭೌಮ ಯೆಹೋವ ದೇವರೇ, ನೀವು ನನ್ನ ನಿರೀಕ್ಷೆ ಆಗಿದ್ದೀರಿ. ನನ್ನ ಯೌವನದಿಂದ ನನ್ನ ಭರವಸೆಯೂ ಆಗಿದ್ದೀರಿ.


ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


“ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು? ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.


ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.


ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.


ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು