Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:11
13 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ನಾವು ನಿಮ್ಮನ್ನು ನಿರೀಕ್ಷಿಸುವ ಪ್ರಕಾರ, ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನಮ್ಮ ಮೇಲೆ ಇರಲಿ.


ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.


ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.


ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.


ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು