Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:13 - ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ನಿನ್ನ ಹೆಬ್ಬಾಗಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ; ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:13
20 ತಿಳಿವುಗಳ ಹೋಲಿಕೆ  

ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.


ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ.


ಯಾಜಕರೂ, ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ, ಬಾಗಿಲುಗಳನ್ನೂ, ಗೋಡೆಯನ್ನೂ ಶುದ್ಧ ಮಾಡಿದರು.


ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.


ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.


ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.


ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.


ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು