Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:14 - ಕನ್ನಡ ಸಮಕಾಲಿಕ ಅನುವಾದ

14 ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:14
15 ತಿಳಿವುಗಳ ಹೋಲಿಕೆ  

ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ಧಾರಾಳವಾಗಿ ದವಸಧಾನ್ಯಗಳಿರಲೆಂದು ನಾನು ಚೀಯೋನನ್ನು ಆಶೀರ್ವದಿಸುವೆನು; ಇಲ್ಲಿ ವಾಸಿಸುವ ಬಡವರು ಉಂಡು ಸಂತೃಪ್ತಿಯಿಂದಿರುವರು.


ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.


ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.


ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.


“ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.


“ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.


ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು