Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 15:4 - ಕನ್ನಡ ಸಮಕಾಲಿಕ ಅನುವಾದ

4 ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 15:4
20 ತಿಳಿವುಗಳ ಹೋಲಿಕೆ  

ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.


“ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು.


ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಮೂರ್ಖಜನರು ನನ್ನಿಂದ ದೂರವಿರುವರು; ದುಷ್ಟತನವನ್ನು ಅರಿಯದಿರುವೆನು.


ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.


ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.


ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.


ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.


ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು