Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 15:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 15:5
29 ತಿಳಿವುಗಳ ಹೋಲಿಕೆ  

ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


“ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.


ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.


ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.


“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.


ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.


ಆಗ ನನ್ನ ಕೋಪವು ಉರಿಯುವುದು. ಖಡ್ಗದಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ.


ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು