Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:3 - ಕನ್ನಡ ಸಮಕಾಲಿಕ ಅನುವಾದ

3 ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:3
20 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ.


“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.


ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು.


ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.


ದೇವರ ಭಕ್ತರ ಮರಣವು ಯೆಹೋವ ದೇವರ ದೃಷ್ಟಿಯಲ್ಲಿ ಅಮೂಲ್ಯವಾಗಿದೆ.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು.


ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ; ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.


ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು