Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ತೋರಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:15
22 ತಿಳಿವುಗಳ ಹೋಲಿಕೆ  

ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.


ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.


ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.


ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ;


ಆಗ ಯೆಹೋವ ದೇವರ ಗದರಿಕೆಯಿಂದಲೂ, ಅವರ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿತು. ಭೂಲೋಕದ ಅಸ್ತಿವಾರಗಳು ಬಯಲಾದವು.


ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.


ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.


ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.


ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ.


ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು