Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:21 - ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರನು ತೊರೆದು ದುರುಳನಾಗದೆ I ನಾನನುಸರಿಸಿದೆ ಪ್ರಭುವಿನ ಮಾರ್ಗವನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೆಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು; ನನ್ನ ದೇವರ ವಿರೋಧನಾಗಿ ನಾನು ಪಾಪಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:21
13 ತಿಳಿವುಗಳ ಹೋಲಿಕೆ  

ನಿಮ್ಮ ನಿಯಮಗಳಿಂದ ನಾನು ತಪ್ಪಿಹೋಗಲಿಲ್ಲ, ಏಕೆಂದರೆ ನೀವೇ ನನಗೆ ಉಪದೇಶಿಸಿದ್ದೀರಿ.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.


“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.


ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.


ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.


ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು