Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:41 - ಕನ್ನಡ ಸಮಕಾಲಿಕ ಅನುವಾದ

41 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೆಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:41
17 ತಿಳಿವುಗಳ ಹೋಲಿಕೆ  

“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.


ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


“ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.


ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು.


ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು