Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:42 - ಕನ್ನಡ ಸಮಕಾಲಿಕ ಅನುವಾದ

42 ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಗಾಳಿಯಿಂದ ಬಡಿಸಿಕೊಂಡು ಹೋಗುವ ದೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:42
10 ತಿಳಿವುಗಳ ಹೋಲಿಕೆ  

ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.


ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?


“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು