Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ವಿಧಿಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:9
36 ತಿಳಿವುಗಳ ಹೋಲಿಕೆ  

ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ನಿಮ್ಮ ನೀತಿಯು ನಿತ್ಯವಾದದ್ದು ನಿಮ್ಮ ನಿಯಮವು ಸತ್ಯವಾದದ್ದು.


ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು.


ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”


ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.


ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.


ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.


ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ, ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.


ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


“ಈಗ ಅವರ ಮುಂದೆ ನೀನು ಇಡತಕ್ಕ ನ್ಯಾಯವಿಧಿಗಳು ಇವೇ.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ.


ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.


ನಿಮ್ಮ ನೀತಿಯುಳ್ಳ ನಿಯಮಗಳಿಗಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಮಧ್ಯರಾತ್ರಿಯಲ್ಲಿ ಏಳುವೆನು.


ನಾನು ಭಯಪಡುವ ನನ್ನ ನಿಂದೆಯನ್ನು ನನ್ನಿಂದ ತೊಲಗಿಸಿರಿ, ಏಕೆಂದರೆ ನಿಮ್ಮ ನಿಯಮಗಳು ಒಳ್ಳೆಯವುಗಳೇ.


ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು