Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:7 - ಕನ್ನಡ ಸಮಕಾಲಿಕ ಅನುವಾದ

7 ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:7
19 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.


ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು.


ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.


“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು