Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:9 - ಕನ್ನಡ ಸಮಕಾಲಿಕ ಅನುವಾದ

9 ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:9
14 ತಿಳಿವುಗಳ ಹೋಲಿಕೆ  

ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.


ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; ಅವನ ವಿರೋಧಿಗಳನ್ನು ದಂಡಿಸುವೆನು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.”


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.


ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು