Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:6 - ಕನ್ನಡ ಸಮಕಾಲಿಕ ಅನುವಾದ

6 ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ; ನಿಮ್ಮ ಸನ್ನಿಧಿಯಲ್ಲಿ ಆತನು ಅಧಿಕ ಆನಂದಪಡುವಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದ ಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ. ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:6
16 ತಿಳಿವುಗಳ ಹೋಲಿಕೆ  

ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.


ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ, ಅದನ್ನು ಆಶೀರ್ವದಿಸಲು ಸಂತೋಷಪಡಿರಿ; ಯೆಹೋವ ದೇವರೇ, ನೀವು ಆಶೀರ್ವದಿಸಿದ್ದೀರಿ, ಅದು ನಿತ್ಯ ಆಶೀರ್ವಾದ ಹೊಂದಿರುವುದು.”


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು