Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:11 - ಕನ್ನಡ ಸಮಕಾಲಿಕ ಅನುವಾದ

11 ನನ್ನಿಂದ ದೂರವಾಗಿರಬೇಡಿರಿ, ಏಕೆಂದರೆ ಇಕ್ಕಟ್ಟು ಸಮೀಪವಾಗಿದೆ, ಸಹಾಯಕರು ನನಗೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗಿರಲು, ನನ್ನನ್ನು ತೊರೆಯಬೇಡ! ಆಪತ್ತು ಸಮೀಪಿಸಿದೆ, ನನಗೆ ಸಹಾಯಮಾಡಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:11
18 ತಿಳಿವುಗಳ ಹೋಲಿಕೆ  

ದೇವರೇ, ನನ್ನಿಂದ ದೂರವಾಗಿರಬೇಡಿರಿ. ದೇವರೇ, ಬೇಗ ಬಂದು ನನಗೆ ಸಹಾಯಮಾಡಿರಿ.


ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.


ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.


ಯೆಹೋವ ದೇವರೇ, ನೀವು ಇದನ್ನು ನೋಡಿದ್ದೀರಿ; ಯೆಹೋವ ದೇವರೇ, ಮೌನವಾಗಿರಬೇಡಿರಿ; ನನಗೆ ದೂರವಾಗಿರಲೂ ಬೇಡಿರಿ.


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು. ಆಗ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನು ಉಂಟುಮಾಡಿತು. ನನ್ನ ಕೋಪವೇ ನನಗೆ ಆಧಾರವಾಯಿತು.


ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ. ನನ್ನ ಶತ್ರುಗಳ ನಿಮಿತ್ತ ನನ್ನನ್ನು ಬಿಡಿಸಿರಿ.


ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. ಕೂಡಲೇ ಹುಂಜ ಕೂಗಿತು.


ಆಗ ಅವನು ಆಣೆ ಮಾಡಿ, “ನಾನು ಆ ಮನುಷ್ಯನನ್ನು ಅರಿಯೆನು,” ಎಂದು ತಿರುಗಿ ನಿರಾಕರಿಸಿದನು.


ಹುಟ್ಟಿನಿಂದ ನೀವೇ ನನ್ನ ಭರವಸೆ. ತಾಯಿಯ ಗರ್ಭದಿಂದ ನೀವೇ ನನ್ನನ್ನು ಹೊರಗೆ ತಂದಿದ್ದೀರಿ. ನಾನು ಯಾವಾಗಲೂ ನಿಮ್ಮನ್ನು ಸ್ತುತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು