Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:21 - ಕನ್ನಡ ಸಮಕಾಲಿಕ ಅನುವಾದ

21 ಸಿಂಹಗಳ ಬಾಯಿಂದ ನನ್ನನ್ನು ರಕ್ಷಿಸಿರಿ; ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸಿಂಹಗಳ ಬಾಯಿಂದಲೂ ಕಾಡುಕೋಣಗಳ ಕೊಂಬುಗಳಿಂದಲೂ ನನ್ನನ್ನು ತಪ್ಪಿಸು. ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:21
12 ತಿಳಿವುಗಳ ಹೋಲಿಕೆ  

ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಕಾಡುಕೋಣಗಳೂ ಹೋರಿಗೂಳಿಗಳೂ ಈ ಯಜ್ಞಪಶುಗಳೊಂದಿಗೆ ಬೀಳುವುವು; ನಾಡು ರಕ್ತದಿಂದ ತೊಯ್ದಿರುವುದು; ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


ಯೆಹೋವ ದೇವರೇ, ಎಷ್ಟರವರೆಗೆ ನೀವು ಸುಮ್ಮನೆ ನೋಡುತ್ತಾ ಇರುವಿರಿ? ಅವರ ಅಪಾಯಗಳಿಂದ ನನ್ನ ಪ್ರಾಣವನ್ನು ಬಿಡಿಸಿರಿ. ಆ ಸಿಂಹಗಳಿಂದ ನನ್ನ ಅಮೂಲ್ಯ ಪ್ರಾಣವನ್ನೂ ತಪ್ಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು