Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:26 - ಕನ್ನಡ ಸಮಕಾಲಿಕ ಅನುವಾದ

26 ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:26
15 ತಿಳಿವುಗಳ ಹೋಲಿಕೆ  

ಇದನ್ನು ದೀನರು ಕಂಡು ಸಂತೋಷಪಡುವರು. ದೇವರನ್ನು ಹುಡುಕುವವರೇ, ನಿಮ್ಮ ಹೃದಯವು ಚೈತನ್ಯಗೊಳ್ಳಲಿ.


ಹೀಗಿರುವುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಸೇವಕರು ತಿನ್ನುವರು. ಆದರೆ ನೀವು ಹಸಿದಿರುವಿರಿ. ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿ ಇರುವಿರಿ. ಇಗೋ, ನನ್ನ ಸೇವಕರು ಸಂತೋಷಪಡುವರು, ಆದರೆ ನೀವು ನಾಚಿಕೆ ಪಡುವಿರಿ.


ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ; ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ಯೆಹೋವ ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.


ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.


ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.


ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು.


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು.


ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು,


ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು