Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:7 - ಕನ್ನಡ ಸಮಕಾಲಿಕ ಅನುವಾದ

7 ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದ್ವಾರಗಳೇ, ಉನ್ನತವಾಗಿರ್ರಿ; ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ; ಮಹಾಪ್ರಭಾವವುಳ್ಳ ಅರಸನು ಆಗವಿುಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:7
23 ತಿಳಿವುಗಳ ಹೋಲಿಕೆ  

ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.


ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ.


ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.


ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ!


ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.


ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.


ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು