Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:14
18 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


“ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.


ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.


ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.


ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.


ಏಕೆಂದರೆ ನೀವು ಸತ್ತಿರುವಿರಲ್ಲಾ, ನಿಮ್ಮ ಜೀವವು ಕ್ರಿಸ್ತ ಯೇಸುವಿನೊಂದಿಗೆ ದೇವರಲ್ಲಿ ಮರೆಯಾಗಿದೆ.


ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು