Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:6
35 ತಿಳಿವುಗಳ ಹೋಲಿಕೆ  

ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.


ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.”


ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ನಾನು ಜೀವಿಸುವಂತೆ ನಿಮ್ಮ ಅನುಕಂಪವು ನನಗೆ ಬರಲಿ, ಏಕೆಂದರೆ ನಿಮ್ಮ ನಿಯಮವೇ ನನ್ನ ಆನಂದವಾಗಿದೆ.


ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು.


ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.


ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.


ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ; ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.


“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.


ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು.


ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ,


ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ.


ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು