Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:1
30 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ.


ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.


ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.


“ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು.


ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ.


ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.


ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ; ಅವನ ಹೆಜ್ಜೆ ಕದಲುವುದಿಲ್ಲ.


ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ.


ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ.


ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.


ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.


ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.


ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;


ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


ನಿನ್ನ ಭಯಭಕ್ತಿಯೇ ನಿನಗೆ ಭರವಸೆಯೂ ನಿನ್ನ ಸನ್ಮಾಮಾರ್ಗಗಳು ನಿನ್ನ ನಿರೀಕ್ಷೆಯೂ ಆಗಿರಬೇಕಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು